
Pulse of the Public
ಕಾಲ್ಪನಿಕ ಚಿತ್ರಶ್ರೀನಿವಾಸಪುರದ ಶ್ರೀ ವೇಣು ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಅಡುಗೆ ಸೇರಿದಂತೆ ವಿವಿಧ ಕೆಲಸಗಳನ್ನು ಮಾಡಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಪೋಷಕರು ಮತ್ತು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾಸನ ತಾಲೂಕಿನ ಶಾಂತಿಗ್ರಾಮದ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮೂಲಸೌಕರ್ಯ ಕೊರತೆ ವರದಿಯಾದ ಹಿನ್ನೆಲೆಯಲ್ಲಿ, 172 ವಿದ್ಯಾರ್ಥಿಗಳನ್ನು ಪರ್ಯಾಯ ವಸತಿನಿಲಯಗಳಿಗೆ ಸ್ಥಳಾಂತರಿಸಲಾಗಿದೆ.
ಮೂಡಲಗಿ ಶೈಕ್ಷಣಿಕ ವಲಯದ ಹಲ್ಲೂರು ಕ್ರಾಸ್ ಕೆ.ಎಚ್.ಪಿ.ಎಸ್ ಶಾಲೆಯ ಶಿಕ್ಷಕ ಬಸಪ್ಪ ಪರಪ್ಪ ಪಾಟೀಲ 2026-27ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಹೊಸೂರಿನ ಪದ್ಮಾವತಿ ಅಂತಾರಾಷ್ಟ್ರೀಯ ಶಾಲೆಯ ಐವರು ವಿದ್ಯಾರ್ಥಿಗಳು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ರಕ್ಷಾಬಂಧನ ಆಚರಿಸಿ ಹೆಮ್ಮೆ ತಂದಿದ್ದಾರೆ.