
Pulse of the Public
ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಅಪೆಂಡಿಕ್ಸ್ ಸ್ಫೋಟಗೊಂಡು ತೀವ್ರ ಆರೋಗ್ಯ ಸಮಸ್ಯೆಗೆ ಈಡಾಗಿದ್ದ 16 ವರ್ಷದ ಬಾಲಕಿಯೊಬ್ಬಳಿಗೆ ಎಂಟು ದಿನಗಳ ಕಾಲ ಇಸಿಎಂಒ ಜೀವ ರಕ್ಷಕ ವ್ಯವಸ್ಥೆಯಡಿ ಚಿಕಿತ್ಸೆ ನೀಡಿ, ಯಶಸ್ವಿಯಾಗಿ ಪ್ರಾಣ ಉಳಿಸಲಾಗಿದೆ.
ಬೆಂಗಳೂರಿನ ರಾಮಯ್ಯ ಮೆಮೋರಿಯಲ್ ಆಸ್ಪತ್ರೆಯಲ್ಲಿ 'ದಿ ಗಿಫ್ಟ್ ಆಫ್ ಲೈಫ್' ಶೀರ್ಷಿಕೆಯಡಿ ಬೃಹತ್ ಅಂಗಾಂಗ ದಾನ ಜಾಗೃತಿ ಅಭಿಯಾನ ಆಯೋಜಿಸಲಾಗಿದ್ದು, ಆರೋಗ್ಯ ಸಚಿವ ಯು.ಟಿ. ಖಾದರ್ ಭಾಗವಹಿಸಿ ಮರಣೋತ್ತರ ಅಂಗಾಂಗ ದಾನಕ್ಕೆ ಕರೆ ನೀಡಿದರು.
ರಾಜ್ಯ ಸರ್ಕಾರದ ನಿವೃತ್ತ ನೌಕರರು ಮತ್ತು ಅವರ ಕುಟುಂಬದವರಿಗೆ ವಾರ್ಷಿಕ ₹5 ಲಕ್ಷದವರೆಗೆ ನಗದ ರಹಿತ ವೈದ್ಯಕೀಯ ಚಿಕಿತ್ಸೆ ಒದಗಿಸುವ 'ಸಂಧ್ಯಾ ಕಿರಣ್' ಯೋಜನೆಯ ಜಾರಿಗೆ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ಆಹಾರ ಸುರಕ್ಷತಾ ಜಾರಿ ಅಭಿಯಾನವನ್ನು ತೀವ್ರಗೊಳಿಸಿದ್ದು, ಸುಮಾರು 1,850 ಸಂಸ್ಥೆಗಳಲ್ಲಿ ತಪಾಸಣೆ ನಡೆಸಿದೆ ಮತ್ತು ಪ್ರಯೋಗಾಲಯ ಪರೀಕ್ಷೆಗಾಗಿ 2,400 ಕ್ಕೂ ಹೆಚ್ಚು ಆಹಾರ ಮಾದರಿಗಳನ್ನು ಸಂಗ್ರಹಿಸಿದೆ. ನೈರ್ಮಲ್ಯ ಮತ್ತು ಗುಣಮಟ್ಟದ ಉಲ್ಲಂಘನೆಗಳನ್ನು ತಡೆಯುವುದು ಈ ಉಪಕ್ರಮದ ಮುಖ್ಯ ಉದ್ದೇಶವಾಗಿದ್ದು, ಇದು ಸಾರ್ವಜನಿಕ ಆರೋಗ್ಯಕ್ಕೆ ಅಪಾಯವನ್ನುಂಟುಮಾಡುತ್ತದೆ.