
Pulse of the Public

ಆಲೂರು ತಾಲೂಕಿನ ಕೆ.ಹೊಸಕೋಟೆ ಹೋಬಳಿಯ ಗ್ರಾಮೀಣ ಭಾಗಗಳಿಗೆ ನೂತನ ಕೆಎಸ್ಆರ್ಟಿಸಿ ಬಸ್ ಸಂಚಾರಕ್ಕೆ ಶಾಸಕ ಸಿಮೆಂಟ್ ಮಂಜು ಚಾಲನೆ ನೀಡಿದ್ದು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರ ದಶಕಗಳ ಸಾರಿಗೆ ಸಮಸ್ಯೆ ಈಡೇರಿದೆ.
ಧಾರವಾಡ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಾರು ರಸ್ತೆ ವಿಭಾಜಕಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು, ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಮುಂಬರುವ ಗಣೇಶ ಚತುರ್ಥಿ, ದಸರಾ ಮತ್ತು ದೀಪಾವಳಿ ಹಬ್ಬಗಳ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ನೈರುತ್ಯ ರೈಲ್ವೆಯು ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ವಾರಾಂತ್ಯದ ವಿಶೇಷ ಎಕ್ಸ್ಪ್ರೆಸ್ ರೈಲು ಸಂಚಾರವನ್ನು ಆರಂಭಿಸಿದೆ.
ರಾಮದುರ್ಗ ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರು ಹಾಗೂ ನೈರ್ಮಲ್ಯ ಕೊರತೆಯಿಂದಾಗಿ ಗ್ರಾಮೀಣ ಭಾಗದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಪರದಾಡುತ್ತಿದ್ದಾರೆ. ನಿಷ್ಕ್ರಿಯಗೊಂಡಿರುವ ನೀರಿನ ಘಟಕ ದುರಸ್ತಿಗೊಳಿಸಿ ಕನಿಷ್ಠ ಸೌಲಭ್ಯ ಕಲ್ಪಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.