
Pulse of the Public
ಕಾಲ್ಪನಿಕ ಚಿತ್ರಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೈಲು ವಾರ್ಡರ್ ಮೇಲಿನ ಹಲ್ಲೆ ಮತ್ತು ಕೊಲೆಗೆ ಯತ್ನಿಸಿದ ಆರೋಪದ ಮೇಲೆ ಐದು ಮಂದಿ ವಿಚಾರಣಾಧೀನ ಕೈದಿಗಳ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಲಾಗಿದೆ. ಜೈಲಿಗೆ ವಸ್ತುಗಳನ್ನು ಕೊಂಡೊಯ್ಯುವ ಭದ್ರತಾ ನಿಯಮಗಳ ವಿಚಾರದಲ್ಲಿ ಉಂಟಾದ ಗಲಾಟೆಯೇ ಈ ದಾಳಿಗೆ ಕಾರಣ ಎಂದು ಹೇಳಲಾಗಿದೆ.
ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮಲಘಾಣ ಗ್ರಾಮದಲ್ಲಿ ತಿಂಡಿ ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ಬಾಲಕರ ಮೇಲೆ ಹಲ್ಲೆ ನಡೆಸಿದ್ದ ಅಂಗಡಿ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.
ಯುವತಿಗೆ ಪ್ರೇಮದ ಹೆಸರಿನಲ್ಲಿ ಕಿರುಕುಳ ನೀಡಿ ಆತ್ಮಹತ್ಯೆಯತ್ನಕ್ಕೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಗುಬ್ಬಿ ತಾಲೂಕಿನ ವ್ಯಕ್ತಿಯ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.
ಹೊಕ್ರಾಣಿ ಗ್ರಾಮದಲ್ಲಿ ನಡೆದ ಗಂಭೀರ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ರಾಯಚೂರು ಎಸ್ಪಿ ಅರುಣಾಂಕ್ಷು ಗಿರಿ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದಾರೆ.