
Pulse of the Public

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್ ಹಾಗೂ ಸಿಮ್ ಕಾರ್ಡ್ ಪೂರೈಸಿದ ಆರೋಪದ ಮೇಲೆ ಜೈಲು ವಾರ್ಡರ್ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ದೇಶದ 20 ರಾಜ್ಯಗಳ 89 ಸ್ಥಳಗಳಲ್ಲಿ 'ಆಪರೇಷನ್ ಚಕ್ರ-6' ಅಡಿಯಲ್ಲಿ ಬೃಹತ್ ದಾಳಿ ನಡೆಸಿದ ಸಿಬಿಐ, 'ಡಿಜಿಟಲ್ ಅರೆಸ್ಟ್' ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಂಚಿಸುತ್ತಿದ್ದ ಸೈಬರ್ ಅಪರಾಧ ಜಾಲದ ಮೂವರು ಪ್ರಮುಖರನ್ನು ಬಂಧಿಸಿದೆ.
ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಜಾಮೀನು ಪ್ರಕ್ರಿಯೆಗೆ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ಸಲ್ಲಿಸಿದ್ದ ಇಬ್ಬರು ವ್ಯಕ್ತಿಗಳನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಹಿರಿಯ ಸಿವಿಲ್ ನ್ಯಾಯಾಲಯದ ಅಧಿಕಾರಿಗಳ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕಲ್ಯಾಣ) ಕಾಯ್ದೆ 2024 ರ ಅಡಿಯಲ್ಲಿ ಚಲನಚಿತ್ರ ಟಿಕೆಟ್ಗಳ ಮೇಲೆ ಶೇ. 2 ರಷ್ಟು ಕಲ್ಯಾಣ ಸಿಎಸ್ ವಿಧಿಸಿ ಹೊರಡಿಸಲಾಗಿದ್ದ ಸರ್ಕಾರಿ ಸುತ್ತೋಲೆಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಕಾಯ್ದೆಯನ್ನು ಜಾರಿಗೆ ತರುವ ಗೆಜೆಟ್ ಅಧಿಸೂಚನೆ ಹೊರಡಿಸದಿರುವುದರಿಂದ ಸಿಎಸ್ ವಸೂಲಿ ಮಾಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.