
Pulse of the Public
ಕಾಲ್ಪನಿಕ ಚಿತ್ರಚನ್ನಗಿರಿ ಉಪವಿಭಾಗದ ಶಾಂತಿಸಾಗರ ವಲಯದ ಯಡೇಹಳ್ಳಿಯಲ್ಲಿ ಅಕ್ರಮ ವಿದ್ಯುತ್ ಬೇಲಿಗೆ ಸಿಲುಕಿ 3 ವರ್ಷದ ಗಂಡು ಕರಡಿ ಮೃತಪಟ್ಟಿದೆ. ಕಳೆಬರವನ್ನು ಹೂತುಹಾಕಿದ್ದ ತೋಟದ ಮಾಲೀಕನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ತರೀಕೆರೆ ತಾಲೂಕಿನ ಭದ್ರಾ ಜಲಾಶಯದ ಇನ್-ಟೇಕ್ ಪಾಯಿಂಟ್ನಿಂದ ಚಿತ್ರದುರ್ಗ ಶಾಖಾ ಕಾಲುವೆಗೆ ಪ್ರಾಯೋಗಿಕವಾಗಿ 3 ಟಿ.ಎಂ.ಸಿ ನೀರು ಬಿಡುಗಡೆಗೆ ಚಾಲನೆ ನೀಡಲಾಗಿದೆ. ಸಚಿವ ಟಿ. ರಘುಮೂರ್ತಿ ಮತ್ತು ತರೀಕೆರೆ ಶಾಸಕ ಜಿ. ಎಚ್. ಶ್ರೀನಿವಾಸ್ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಮೂಡಿಗೆರೆ ತಾಲೂಕಿನ ಮಧುಗುಂಡಿ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ 72 ವರ್ಷದ ರೈತರೊಬ್ಬರ ಮೇಲೆ ಕಾಡುಕೋಣ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದೆ.
ಭಾಲ್ಕಿ ತಾಲೂಕಿನ ಆನಂದವಾಡಿ ಗ್ರಾಮದಲ್ಲಿ ಕಾಡುಹಂದಿ ದಾಳಿಯಿಂದ ಮೃತಪಟ್ಟ ರೈತ ಚನ್ನಬಸಪ್ಪ ಭೂರೇ ಅವರ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ₹20 ಲಕ್ಷ ಪರಿಹಾರದ ಚೆಕ್ ವಿತರಿಸಿದರು.