
Pulse of the Public
ಕಾಲ್ಪನಿಕ ಚಿತ್ರಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ವಲಯ (ಇಎಸ್ಎ) ಕರಡು ಅಧಿಸೂಚನೆ ಹಿಂಪಡೆಯಲು ಒತ್ತಾಯಿಸಿ, ಹೊಸನಗರ ತಾಲೂಕಿನ ಸಾವಿರಾರು ರೈತರು ಕಾರನಗಿರಿಯಿಂದ ಹೊಸನಗರ ಪಟ್ಟಣದವರೆಗೆ ೯ ಕಿಲೋಮೀಟರ್ ಬೃಹತ್ ಪಾದಯಾತ್ರೆ ನಡೆಸಿದರು.
ಮಂಡ್ಯದ ಮೈಶುಗರ್ ಸಕ್ಕರೆ ಕಾರ್ಖಾನೆಯ ಬಿಸಿ ನೀರು ಹೊಂಡಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದ ೩೩ ವರ್ಷದ ಗುತ್ತಿಗೆ ಕಾರ್ಮಿಕ ಚರಣ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಕಾರ್ಖಾನೆ ಎದುರು ಪ್ರತಿಭಟನೆ ವ್ಯಕ್ತವಾಗಿದೆ.
ಜೇವರ್ಗಿ ತಾಲೂಕಿನ ಇಟ್ಟನಹಳ್ಳಿ ಗ್ರಾಮದ 93 ರೈತರು ಪಾವತಿಸಿದ ಬೆಳೆ ವಿಮೆ ಹಣವನ್ನು ಡಿಸಿಸಿ ಬ್ಯಾಂಕ್ಗೆ ಜಮೆ ಮಾಡದ ಸೊಸೈಟಿ ಕಾರ್ಯದರ್ಶಿಯನ್ನು ವಜಾಗೊಳಿಸಲು ಡಿ.ಕೆ. ಶಿವಕುಮಾರ್ ಸೂಚಿಸಿದ್ದಾರೆ.
ಚಿತ್ತಾಪುರ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ತಕ್ಷಣ ಪರಿಹಾರ ಮಂಜೂರು ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಹಶೀಲ್ದಾರರಿಗೆ ಮನವಿ ಸಲ್ಲಿಸಿದೆ.