
Pulse of the Public

ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸುಳ್ಯ ತಾಲೂಕಿನ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಮೊಸರು ಕುಡಿಕೆ ಉತ್ಸವ ವಿಜೃಂಭಣೆಯಿಂದ ನಡೆಯಿತು. ಧಾರ್ಮಿಕ ಪೂಜೆ, ಭಜನೆ, ಆಟೋಟ ಸ್ಪರ್ಧೆಗಳು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಈ ಸಂದರ್ಭದಲ್ಲಿ ಜರುಗಿದವು.
ಕಿಲ್ಪಾಡಿಯ ಶ್ರೀ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ದೈವಿಕ ಆಭರಣಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಲ್ಕಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದು, ಪ್ರಕರಣದಲ್ಲಿ ಬಂಧಿತರ ಒಟ್ಟು ಸಂಖ್ಯೆ ನಾಲ್ಕಕ್ಕೇರಿದೆ.
ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ದುರಂತಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿರುವ ಶೃಂಗೇರಿ ಶಾರದಾ ಪೀಠದ ಕಿರಿಯ ಶ್ರೀಗಳಾದ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ, ಸಂತ್ರಸ್ತರಿಗೆ ಅಗತ್ಯ ಆಹಾರ ಹಾಗೂ ಪರಿಹಾರ ಸಾಮಗ್ರಿಗಳನ್ನು ತಕ್ಷಣವೇ ತಲುಪಿಸಲು ನಿರ್ದೇಶಿಸಿದ್ದಾರೆ.
ಬಾಗೇಪಲ್ಲಿ ತಾಲೂಕಿನ ಗಡಿದಂ ಶ್ರೀ ಲಕ್ಷ್ಮಿ ವೆಂಕಟರಮಣಸ್ವಾಮಿ ದೇವಾಲಯದ ಬಳಿ ಎಸ್ಎನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆದ ಸಾಮೂಹಿಕ ವಿವಾಹದಲ್ಲಿ 106 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟವು. ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರು ಪ್ರತಿಯೊಂದು ನವಜೋಡಿಗೆ ಸೀಮೆ ಹಸು ಹಾಗೂ ನಗದು ನೆರವು ನೀಡಿದರು.