
Pulse of the Public

ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಭ್ರಷ್ಟಾಚಾರವನ್ನು ಖಂಡಿಸಿ ಬಿಜೆಪಿ ರಾಯಚೂರು ಜಿಲ್ಲೆಯ ಲಿಂಗಸಗೂರಿನಿಂದ 10 ದಿನಗಳ 'ಬಳ್ಳಾರಿ ಚಲೋ' ಪಾದಯಾತ್ರೆಯನ್ನು ಆರಂಭಿಸಿದೆ. ಬಿ.ಎಸ್. ಯಡಿಯೂರಪ್ಪ ಮತ್ತು ಬಿ.ವೈ. ವಿಜಯೇಂದ್ರ ಅವರು ಯಾತ್ರೆಗೆ ಚಾಲನೆ ನೀಡಿದರು.
ಕಬಿನಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಬೀಚನಹಳ್ಳಿ ಬಳಿಯ ಕಬಿನಿ ಡ್ಯಾಂ ಬಳಿ ನೂರಾರು ರೈತರು ಪ್ರತಿಭಟನೆ ನಡೆಸಿದರು. ಸ್ಥಳೀಯ ಅಚ್ಚುಕಟ್ಟು ಭಾಗದ ನಾಲೆಗಳಿಗೆ ಹಾಗೂ ಕೆರೆಗಳಿಗೆ ನೀರು ತುಂಬಿಸಲು ಆದ್ಯತೆ ನೀಡಬೇಕೆಂದು ರೈತ ಸಂಘಟನೆಗಳು ಆಗ್ರಹಿಸಿವೆ.
ನಾಪೋಕ್ಲು ಸಮೀಪದ ನೈಸರ್ಗಿಕ ಸೂಕ್ಷ್ಮ ಪ್ರದೇಶಗಳಾದ ನೆಲ್ಜಿ ಮತ್ತು ಪೇರೂರು ಭಾಗಗಳಲ್ಲಿ ಅಕ್ರಮ ಗುಂಪು ಚಾರಣ ಹಾಗೂ ಡ್ರೋನ್ ಹಾರಾಟ ನಡೆಸುವುದನ್ನು ಕೊಡಗು ಅರಣ್ಯ ಇಲಾಖೆ ನಿಷೇಧಿಸಿದೆ.
ಬೇಲೂರು ತಾಲೂಕಿನ ಕೋಗಿಲೆಮನೆ ಗ್ರಾಮದಲ್ಲಿ ತಗ್ಗಿನಲ್ಲಿ ತಾಲಾಡುತ್ತಿದ್ದ ವಿದ್ಯುತ್ ತಂತಿಗೆ ಸ್ಪರ್ಶಿಸಿ 25 ವರ್ಷದ ಹೆಣ್ಣು ಕಾಡಾನೆ ಮೃತಪಟ್ಟಿದೆ. ಅರಣ್ಯ ಇಲಾಖೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ (ಸಿಇಎಸ್ಸಿ) ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿದೆ.