
Pulse of the Public
ಕಾಲ್ಪನಿಕ ಚಿತ್ರಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿದ ಬೆನ್ನಲ್ಲೇ, ಅಧಿಕಾರಿಗಳು ದಾಳಿ ನಡೆಸಿ 19 ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ ಮತ್ತು ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಜಲಾಶಯಗಳಿಗೆ ನೀರಿನ ಒಳಹರಿವು ಕಡಿಮೆಯಾಗಿದ್ದರೂ ತಮಿಳುನಾಡಿಗೆ ಪ್ರತಿದಿನ ೬,೦೦೦ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ನಿರ್ದೇಶಿಸಿದೆ. ಈ ಆದೇಶಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಕರ್ನಾಟಕದ ನೀರಾವರಿ ಸಚಿವ ಎನ್. ಚೆಲುವರಾಯಸ್ವಾಮಿ, ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂದಿದ್ದಾರೆ.
ಪೋಲೀಸರಿಂದ ತಪ್ಪಿಸಿಕೊಳ್ಳಲು ಭಂಡಾರಹಳ್ಳಿಯ ಹಳ್ಳದ ನೀರಿನೊಳಗೆ ಅಡಗಿ ಕುಳಿತಿದ್ದ 16 ಪ್ರಕರಣಗಳ ರೌಡಿಶೀಟರ್ ದಿಲೀಪ್ ಅಲಿಯಾಸ್ ಕರಿಯನನ್ನು ಭದ್ರಾವತಿ ನ್ಯೂ ಟೌನ್ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ.
ಕಮಲಾಪುರ ಹೊರವಲಯದ ಟೈರ್ ಕಾರ್ಖಾನೆಯಲ್ಲಿ ಭಾರಿ ಸ್ಫೋಟ ಸಂಭವಿಸಿ ಬೆಂಕಿ ಹೊತ್ತಿಕೊಂಡಿದ್ದು, ಆತಂಕಗೊಂಡ ಗ್ರಾಮಸ್ಥರು ಘಟಕವನ್ನು ತಕ್ಷಣ ಸ್ಥಗಿತಗೊಳಿಸುವಂತೆ ಆಗ್ರಹಿಸಿದ್ದಾರೆ.