
Pulse of the Public

ಶನಿವಾರ ಬೆಂಗಳೂರಿನಲ್ಲಿ ಗರಿಷ್ಠ ೩೨.೬ ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ಕಳೆದ ಒಂದು ದಶಕದಲ್ಲೇ ಸೆಪ್ಟೆಂಬರ್ ತಿಂಗಳ ಅತಿ ಹೆಚ್ಚು ಉಷ್ಣಾಂಶವಾಗಿದೆ. ಮಳೆಯ ಅಭಾವ, ಮೋಡವಿಲ್ಲದ ಆಕಾಶ ಮತ್ತು ಒಣ ಹವಾಮಾನವೇ ಈ ತಾಪಮಾನ ಹೆಚ್ಚಳಕ್ಕೆ ಮುಖ್ಯ ಕಾರಣ ಎಂದು ಹವಾಮಾನ ಇಲಾಖೆ ತಿಳಿಸಿದೆ.
ತಮಿಳುನಾಡಿಗೆ ದಿನಂಪ್ರತಿ 6,000 ಕ್ಯೂಸೆಕ್ ಕಾವೇರಿ ನೀರು ಬಿಡುಗಡೆ ಮಾಡುವಂತೆ ನೀಡಿರುವ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 14ರಂದು ವಿಚಾರಣೆ ನಡೆಸಲಿದೆ. ಮಳೆಯ ಕೊರತೆಯಿಂದಾಗಿ ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ತೀವ್ರ ಕುಸಿದಿದೆ ಎಂದು ಸರ್ಕಾರ ತಿಳಿಸಿದೆ.
ಬೆಂಗಳೂರಿನ ಮಿನರ್ವಾ ಸರ್ಕಲ್ ಬಳಿಯ ಹೆಲ್ತ್ಕೇರ್ ಮೇಲೆ ದಾಳಿ ನಡೆಸಿದ ಎಸ್ಐಟಿ ತಂಡ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಸಲಾಗುತ್ತಿದ್ದ ನಕಲಿ ಕ್ಯಾನ್ಸರ್ ಔಷಧಗಳು ಹಾಗೂ ಐಸಿಯು ಇಂಜೆಕ್ಷನ್ಗಳನ್ನು ವಶಪಡಿಸಿಕೊಂಡಿದೆ.
ಬೆಂಗಳೂರು ನಗರ ಪೊಲೀಸರು ನಗರದಾದ್ಯಂತ ವಾಣಿಜ್ಯ ಸಂಸ್ಥೆಗಳ ಮೇಲೆ ದಾಳಿ ನಡೆಸಿ, ಕಾನೂನುಬಾಹಿರವಾಗಿ ದುಡಿಸಿಕೊಳ್ಳುತ್ತಿದ್ದ 100ಕ್ಕೂ ಹೆಚ್ಚು ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ.