
Pulse of the Public

ಅಳ್ನಾವರ ತಾಲೂಕಿನಲ್ಲಿ ವಾಡಿಕೆಗಿಂತ ಶೇಕಡಾ 50ಕ್ಕಿಂತ ಹೆಚ್ಚು ಮಳೆ ಅಭಾವ ಉಂಟಾಗಿದ್ದರೂ ತಾಲೂಕನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿರುವುದಕ್ಕೆ ರೈತರು ಹಾಗೂ ಸ್ಥಳೀಯ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.
ಧಾರವಾಡ ತಾಲೂಕಿನ ಹೊಸವಾಲ, ವೀರಾಪುರ, ರಾಮಾಪುರ ಹಾಗೂ ಹೆಗ್ಗೇರಿ ಗ್ರಾಮಗಳ ರೈತರು ಧಾರವಾಡ–ಬೆಳಗಾವಿ ಕೈಗಾರಿಕಾ ಕಾರಿಡಾರ್ ಯೋಜನೆಗೆ ಫಲವತ್ತಾದ ಕೃಷಿ ಭೂಮಿ ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ತಮ್ಮ ತಲೆಮಾರುಗಳಿಂದ ಸಾಗುವಳಿ ಮಾಡುತ್ತಿರುವ ಸುಮಾರು 270 ಎಕರೆ ಜಮೀನನ್ನು ಸರ್ಕಾರಿ ‘ಬಿ ಖರಾಬು’ ಎಂದು ನಮೂದಿಸಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ಚನ್ನಗಿರಿ ಉಪವಿಭಾಗದ ಶಾಂತಿಸಾಗರ ವಲಯದ ಯಡೇಹಳ್ಳಿಯಲ್ಲಿ ಅಕ್ರಮ ವಿದ್ಯುತ್ ಬೇಲಿಗೆ ಸಿಲುಕಿ 3 ವರ್ಷದ ಗಂಡು ಕರಡಿ ಮೃತಪಟ್ಟಿದೆ. ಕಳೆಬರವನ್ನು ಹೂತುಹಾಕಿದ್ದ ತೋಟದ ಮಾಲೀಕನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ತರೀಕೆರೆ ತಾಲೂಕಿನ ಭದ್ರಾ ಜಲಾಶಯದ ಇನ್-ಟೇಕ್ ಪಾಯಿಂಟ್ನಿಂದ ಚಿತ್ರದುರ್ಗ ಶಾಖಾ ಕಾಲುವೆಗೆ ಪ್ರಾಯೋಗಿಕವಾಗಿ 3 ಟಿ.ಎಂ.ಸಿ ನೀರು ಬಿಡುಗಡೆಗೆ ಚಾಲನೆ ನೀಡಲಾಗಿದೆ. ಸಚಿವ ಟಿ. ರಘುಮೂರ್ತಿ ಮತ್ತು ತರೀಕೆರೆ ಶಾಸಕ ಜಿ. ಎಚ್. ಶ್ರೀನಿವಾಸ್ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು.