
Pulse of the Public
ಕಾಲ್ಪನಿಕ ಚಿತ್ರಕೊಲಂಬೊದಲ್ಲಿ ನಡೆದ ಶ್ರೀಲಂಕಾ ರಕ್ಷಣಾ ಸಚಿವಾಲಯದ ಉನ್ನತ ಸಭೆಯಲ್ಲಿ ಮಾತನಾಡಿದ ರಕ್ಷಣಾ ಸಚಿವ ರಾಜ್ನಾಥ್ ಸಿಂಗ್, ಹಿಂದೂ ಮಹಾಸಾಗರ ವಲಯದಲ್ಲಿ ನೌಕಾಯಾನ ಸ್ವಾತಂತ್ರ್ಯ ಹಾಗೂ ಕಡಲ ಭದ್ರತೆಗಾಗಿ ಜಂಟಿ ನಿಯಮಾವಳಿಗಳನ್ನು ರೂಪಿಸುವಂತೆ ಆಹ್ವಾನ ನೀಡಿದರು.
ಕೇಂದ್ರ ಶಿಕ್ಷಣ ಸಚಿವಾಲಯ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸಹಯೋಗದಲ್ಲಿ ನವದೆಹಲಿಯ ಭಾರತ್ ಮಂಟಪದಲ್ಲಿ 'ಬ್ರಿಕ್ಸ್ ಭಾರತ್ ಇನ್ನೋವೇಟ್ಸ್ ಪ್ರದರ್ಶನ' ಪ್ರಾರಂಭವಾಗಿದೆ. 18ನೇ ಬ್ರಿಕ್ಸ್ ಶೃಂಗಸಭೆಯ ಭಾಗವಾಗಿ 37 ಪ್ರಮುಖ ಭಾರತೀಯ ದೀಪ್-ಟೆಕ್ ಸ್ಟಾರ್ಟ್ಅಪ್ಗಳನ್ನು ಪ್ರದರ್ಶಿಸಲಾಗುತ್ತಿದೆ.
ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ದೇಶಾದ್ಯಂತ ಆರು ಪ್ರಮುಖ ಕಾರ್ಯಾಚರಣೆಗಳನ್ನು ನಡೆಸಿ 13 ಜನರನ್ನು ಬಂಧಿಸಿದ್ದು, ಬೆಂಗಳೂರಿನಲ್ಲಿ 180 ಜೀವಂತ ನಕ್ಷತ್ರ ಆಮೆಗಳು ಸೇರಿದಂತೆ ಸಂರಕ್ಷಿತ ವನ್ಯಜೀವಿಗಳನ್ನು ವಶಪಡಿಸಿಕೊಂಡಿದೆ.
ಪ್ರಷ್ಟಿತ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭವನ್ನು ನವದೆಹಲಿಯಿಂದ ಹೊರಗೆ ಆಯೋಜಿಸುವ ಪ್ರಮುಖ ನೀತಿ ನಿರ್ಧಾರದ ಭಾಗವಾಗಿ, ಗುಜರಾತ್ನ ಕೆವಾಡಿಯಾದ ಏಕತಾ ನಗರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 72ನೇ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಪ್ರಕಟಿಸಿದೆ.