
Pulse of the Public

ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಸದ್ಗುರು ಶ್ರೀ ಮಧುಸೂದನ್ ಸಾಯಿ ಅವರಿಗೆ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ 'ದಾಸೋಹ ರತ್ನ' ಪ್ರಶಸ್ತಿ ಪ್ರದಾನ ಮಾಡಿದರು.
ನೆಲಮಂಗಲದ ಬಸವಣ್ಣ ದೇವರ ಮಠದ ಆವರಣದಲ್ಲಿ ಸೆಪ್ಟೆಂಬರ್ 25ರಂದು ನಡೆಯಲಿರುವ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಕಾರ್ಯಕ್ರಮದ ಕರಪತ್ರವನ್ನು ಶ್ರೀ ಸಿದ್ದಲಿಂಗ ಸ್ವಾಮೀಜಿ ಬಿಡುಗಡೆ ಮಾಡಿದರು.
ಬಾಗಲಕೋಟೆ ತಾಲೂಕಿನ ಗದ್ದನಕೇರಿ ತಾಂಡಾದ ಪ್ರಸಿದ್ಧ ದುರ್ಗಾದೇವಿ ದೇವಸ್ಥಾನದ 3 ಕೋಟಿ ರೂ. ಹಣ ಹಾಗೂ 5 ಕೆಜಿ ಚಿನ್ನದ ಲೆಕ್ಕದ ವಿವಾದ ಸಂಧಾನದ ಮೂಲಕ ಸುಖಾಂತ್ಯ ಕಂಡಿದೆ. ಬಂಜಾರ ಮುಖಂಡರು ನಡೆಸಿದ ಸಭೆಯಲ್ಲಿ ಸಂಪೂರ್ಣ ಲೆಕ್ಕ ಒಪ್ಪಿಸಲಾಗಿದ್ದು, ಎರಡೂ ಬಣಗಳು ದ್ವೇಷ ಮರೆತು ಮುಂಬರುವ ಜಾತ್ರೆಯನ್ನು ಒಗ್ಗಟ್ಟಿನಿಂದ ಆಚರಿಸಲು ನಿರ್ಧರಿಸಿವೆ.
ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಮುಧೋಳ ತಾಲೂಕಿನ ಮಂಟೂರ ಗ್ರಾಮದ ಮೂವರು ಬಾಲಕರು ಪೊಲೀಸ್ ಠಾಣೆಗೆ ತೆರಳಿ ಸಿಪಿಐ ನಾಗರೆಡ್ಡಿ ಅವರಿಗೆ ಅರ್ಜಿ ಸಲ್ಲಿಸಿ ಮೆಚ್ಚುಗೆ ಪಡೆದಿದ್ದಾರೆ.